TSK

TSK · ಙ್ಞಾನೋಕ್ತಿಗಳು 27:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.

ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.

ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.

ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.

ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.