ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
TSK
TSK · ಙ್ಞಾನೋಕ್ತಿಗಳು 27:4
Treasury of Scripture Knowledge references in Kannada KJV.
ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?