ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
TSK
TSK · ಙ್ಞಾನೋಕ್ತಿಗಳು 28:12
Treasury of Scripture Knowledge references in Kannada KJV.
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--