ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
TSK
TSK · ಙ್ಞಾನೋಕ್ತಿಗಳು 28:17
Treasury of Scripture Knowledge references in Kannada KJV.
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.