ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
TSK
TSK · ಙ್ಞಾನೋಕ್ತಿಗಳು 28:18
Treasury of Scripture Knowledge references in Kannada KJV.
ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.