TSK

TSK · ಙ್ಞಾನೋಕ್ತಿಗಳು 29:10

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.

ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.

ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.

ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.

ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.

ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;