TSK

TSK · ಙ್ಞಾನೋಕ್ತಿಗಳು 29:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)

ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.

ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.

ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.

ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.

ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.