ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.
TSK
TSK · ಙ್ಞಾನೋಕ್ತಿಗಳು 29:25
Treasury of Scripture Knowledge references in Kannada KJV.
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.