ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
TSK
TSK · ಙ್ಞಾನೋಕ್ತಿಗಳು 29:8
Treasury of Scripture Knowledge references in Kannada KJV.
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.