TSK

TSK · ಙ್ಞಾನೋಕ್ತಿಗಳು 3:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.