TSK

TSK · ಙ್ಞಾನೋಕ್ತಿಗಳು 30:8

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು

ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.

ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.

ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.

ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.

ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.

ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.

ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.

ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.

ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.