TSK

TSK · ಙ್ಞಾನೋಕ್ತಿಗಳು 31:26

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.

ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.

ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.

ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.

ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.

ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.

ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.

ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.

ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.

ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.

ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.

ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.