ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
TSK
TSK · ಙ್ಞಾನೋಕ್ತಿಗಳು 31:30
Treasury of Scripture Knowledge references in Kannada KJV.
ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.