TSK

TSK · ಙ್ಞಾನೋಕ್ತಿಗಳು 31:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.

ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.

ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.

ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.

ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.