ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
TSK
TSK · ಙ್ಞಾನೋಕ್ತಿಗಳು 31:8
Treasury of Scripture Knowledge references in Kannada KJV.
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.