ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
TSK
TSK · ಙ್ಞಾನೋಕ್ತಿಗಳು 4:13
Treasury of Scripture Knowledge references in Kannada KJV.
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.