ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
TSK
TSK · ಙ್ಞಾನೋಕ್ತಿಗಳು 4:18
Treasury of Scripture Knowledge references in Kannada KJV.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.
ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.