TSK

TSK · ಙ್ಞಾನೋಕ್ತಿಗಳು 4:19

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.

ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.

ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.

ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ

ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.

ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.

ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.

ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.